
ಭಾರತ ಮಿಸೈಲ್ ದಾಳಿಗೆ ಪಾಕ್ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ
ಇಸ್ಲಾಮಾಬಾದ್: ಪಹಲ್ಗಾಮ್ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ ದಿಟ್ಟ ಉತ್ತರ ನೀಡಿದೆ. ಭಾರತದ ಮಿಲಿಟರಿ ದಾಳಿಗೆ ತತ್ತರಿಸಿರುವ ಪಾಕ್ ಇದೀಗ ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದೆ. ಭಾರತದ ನಡೆಸಿದ ಮಿಸೈಲ್ ದಾಳಿಯಿಂದ ಪಾಕಿಸ್ತಾನದ ವಾಯುನೆಲೆ ಸೇರಿದಂತೆ ಪಾಕ್ನ ಮೂಲಭೂತ ಸೌಕರ್ಯಗಳು ಭಾರೀ ಪ್ರಮಾಣದಲ್ಲಿ ಹಾನಿಯಾಗಿದ್ದು, ಆರ್ಥಿಕ ನಷ್ಟಕ್ಕೆ ತುತ್ತಾಗಿದೆ. ಹೀಗಾಗಿ ಇಸ್ಲಾಮಾಬಾದ್ ಶುಕ್ರವಾರ ತುರ್ತು ಸಾಲ ನೀಡುವಂತೆ ವಿಶ್ವಬ್ಯಾಂಕ್ಸೇರಿದಂತೆ ತನ್ನ ಅಂತರರಾಷ್ಟ್ರೀಯ ಪಾಲುದಾರರಿಗೆ ಮನವಿ ಮಾಡಿದೆ.ತನ್ನ ಎಕ್ಸ್ ಖಾತೆಯಲ್ಲಿ ಅಧಿಕೃತ ಸಂದೇಶ ಹಂಚಿಕೊಂಡಿರುವ ಪಾಕಿಸ್ತಾನ ಸರ್ಕಾರವು, ಶತ್ರುಗಳಿಂದ ಉಂಟಾದ ಭಾರೀ ನಷ್ಟದ ನಂತರ ಪಾಕಿಸ್ತಾನ ಸರ್ಕಾರ ಅಂತಾರಾಷ್ಟ್ರೀಯ ಪಾಲುದಾರರಿಗೆ ಹೆಚ್ಚಿನ ಸಾಲಕ್ಕಾಗಿ ಮನವಿ ಮಾಡುತ್ತಿದೆ. ಹೆಚ್ಚುತ್ತಿರುವ ಯುದ್ಧ ಮತ್ತು ಷೇರು ಕುಸಿತದ ಮಧ್ಯೆ, ಆರ್ಥಿಕ ದುಸ್ತರ ಕಡಿಮೆ ಮಾಡಲು ಸಹಾಯ ಮಾಡುವಂತೆ ಪಾಲುದಾರರನ್ನು ಒತ್ತಾಯಿಸುತ್ತೇವೆ. ರಾಷ್ಟ್ರವು ದೃಢವಾಗಿರಲು ಮನವಿ ಮಾಡುತ್ತಿದೆ ಎಂದು ಬರೆದುಕೊಂಡಿದೆ.


